ಕಾಲುವೆಗೆ ಬಿದ್ದ ಕಾರು, ಇಬ್ಬರ ಸಾವು

101

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕಾರೊಂದು ಕಾಲುವೆಗೆ ಬಿದ್ದು ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಇದೇ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ಯೋಗಾನಂದ ಹಾಗೂ ನಂದೀಶ್ ಮೃತ ದುರ್ದೈವಿಗಳು.

ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದೆ. ಈ ಹಿಂದೆಯೂ ಹಲವು ಬಾರಿ ಕಾಲುವೆಗೆ ಬಿದ್ದು ಸಾರ್ವಜನಿಕರು ಸಾವು, ನೋವು ಅನುಭವಿಸಿದ್ದಾರೆ. ಹೀಗಿದ್ದರೂ ಇಲ್ಲಿ ತಡೆಗೋಡೆ ನಿರ್ಮಿಸಿಲ್ಲ. ಶಾಸಕರು ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!