ಕಾರು ಅಪಘಾತ: ಕರ್ನಾಟಕದ ಇಬ್ಬರು ಪೊಲೀಸರು ಸೇರಿ ಮೂವರ ನಿಧನ

362

ಪ್ರಜಾಸ್ತ್ರ ಸುದ್ದಿ

ಚಿತ್ತೂರು: ಕಾರು ಅಪಘಾತ ಪ್ರಕರಣದಲ್ಲಿ ಕರ್ನಾಟಕದ ಇಬ್ಬರು ಪೊಲೀಸರು ಸೇರಿ ಮೂವರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಚಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಪೊಲೀಸ್ ಠಾಣೆಯ ಎಸ್ಐ ಅವಿನಾಶ್ ಹಾಗೂ ಕಾನ್ಸ್ ಟೇಬಲ್ ಅನಿಲ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ.

ತಿರುಪತಿಗೆ ಹೊರಟಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಅಂಡರ್ ಪಾಸ್ ಸೇತುವೆ ಹತ್ತಿರದ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಾಯಾಳುಗಳನ್ನು ವೆಲ್ಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!