ಮಂಡ್ಯದಲ್ಲಿ ಭೀಕರ ಕಾರು ಅಪಘಾತ: ಮೂವರ ಸಾವು

233

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕಾರೊಂದು ಹಳ್ಳಕ್ಕೆ ಬಿದ್ದು ಹೊತ್ತಿಕೊಂಡು ಉರಿದಿದೆ. ಇದರ ಪರಿಣಾಮ ಮೂವರು ಸಹಜೀವ ದಹನವಾದ ದುರಂತ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಒಂದು ದುರಂತ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಶೇಖ್ ಫೈಸಲ್(44), ಮೆಹಕ್(33) ಹಾಗೂ ಶೇಖ್ ಆಯಿಲ್(11) ಈ ಮೂವರು ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಪ್ರಯಾಣಿಸ್ತಿದ್ರು. ಮಳವಳ್ಳಿಯ ಹಲಗೂರು ಬಳಿ ಬರ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಬಿದ್ದ ಕ್ಷಣಾರ್ಧದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.




Leave a Reply

Your email address will not be published. Required fields are marked *

error: Content is protected !!