ಚಿತ್ರದುರ್ಗ ಬಳಿ ಭೀಕರ ಅಪಘಾತ, ವಿಜಯಪುರದ ನಾಲ್ವರ ಸಾವು

389

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಕಾರಿನ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮಲ್ಲಾಪುರ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.

ಸಂಗನಬಸಪ್ಪ(36), ಪತ್ನಿ ರೇಖಾ(29), ಮಗ ಅಗಸ್ತ್ಯ(08) ಹಾಗೂ ಸಂಬಂಧಿ ಭೀಮಾಶಂಕರ್(26) ಮೃತ ದುರ್ದೈವಿಗಳು. ಸಂಗನಬಸಪ್ಪನ ಇನ್ನಿಬ್ಬರು ಮಕ್ಕಳಾದ ಅನ್ವಿತಾ(06), ಆದರ್ಶ(04) ಹಾಗೂ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ಸಂಗನಬಸಪ್ಪ, ವಾರದ ರಜೆ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಕಾರಿನಲ್ಲಿ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದರು. ಊರಿನಿಂದ ಶನಿವಾರ ರಾತ್ರಿ ತೆರಳಿದ್ದಾರೆ. ಭಾನುವಾರ ಮುಂಜಾನೆ ಸುಮಾರು 3.30ರ ಸಮಯದಲ್ಲಿ ಅಪಘಾತ ನಡೆದು ನಾಲ್ವರು ಮೃತಪಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!