ಪ್ರಜಾಸ್ತ್ರ ಸುದ್ದಿ
ಗದಗ: ಕಾರು ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ. ನವಲಗುಂದ ತಾಲೂಕಿನ ಆರಟ್ಟಿ ಗ್ರಾಮದ ವಿರೇಶ(26), ಬಾಪುಗೌಡ (25), ಶೇಕಪ್ಪ(45) ಹಾಗೂ ಸಾವಿತ್ರಿ(50) ಮೃತ ದುರ್ದೈವಿಗಳು.
ಲಕ್ಷ್ಮೇಶ್ವರದಲ್ಲಿರುವ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೊರಟ್ಟಿದ್ರು. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ಬಾಪುಗೌಡ ಎಂಬಾತನ ಮದುವೆ ಇದೆ ಮೇ 20ರಂದು ನಿಶ್ಚಿಯವಾಗಿತ್ತು ಎಂದು ಹೇಳಲಾಗ್ತಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.