ಪ್ರಜಾಸ್ತ್ರ ಸುದ್ದಿ
ನಾಗಮಂಗಲ: ನಿಂತಿದ್ದ ಟಿಪ್ಪರ್ ಲಾರಿಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ತಿರುಮಲಾಪುರ ಗ್ರಾಮದ ಹತ್ತಿರ ನಡೆದಿದೆ.
ಅತಿವೇಗವಾಗಿ ಬಂದ ಸ್ಯಾಂಟ್ರೋ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಹೇಮಂತ್, ಶರತ್, ನವೀನ್ ಹಾಗೂ ಇನ್ನೋರ್ವ ಮೃತಪಟ್ಟಿದ್ದಾನೆ. ಆತನ ಗುರುತು ಪತ್ತೆಯಾಗಬೇಕಿದೆ. ಬಿಜಿಎಸ್ ಆಸ್ಪತ್ರೆಗೆ ಮೃತದೇಹಗಳನ್ನು ಸಾಗಿಸಲಾಗಿದೆ.
ಟಿ.ನರಸೀಪುರ ಹತ್ತಿರ ಮೇ 29ರಂದು ಖಾಸಗಿ ಬಸ್ ಹಾಗೂ ಇನೋವಾ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದರು. ಇವರೆಲ್ಲ ಮೂರು ಕುಟುಂಬಗಳ ಸದಸ್ಯರಾಗಿದ್ದರು.