ಭೀಕರ ಕಾರು ಅಪಘಾತ, 6 ಜನರ ದುರ್ಮರಣ

115

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕಿತ್ತೂರಿನಿಂದ ಬೀಡಿ ಗ್ರಾಮದ ಕಡೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ಸಿಗದೆ ಮರಕ್ಕೆ ಹೊಡೆದಿದೆ. ಇದರ ಪರಿಣಾಮ ಆರು ಜನರು ಮೃತಪಟ್ಟಿರುವ ದಾರುಣ ಘಟನೆ ಖಾನಾಪುರ ತಾಲೂಕಿನ ಮಂಗೇನಕೊಪ್ಪ ಗ್ರಾಮದ ಹತ್ತಿರ ನಡೆದಿದೆ.

ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಮಕ್ಕಳು ಸೇರಿ 10 ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ. ನಂದಗಢ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಮೃತಪಟ್ಟವರ ವಿವರ. ಅವರ ಮೂಲ ಊರು ಯಾವುದು, ಅಲ್ಲಿಂದ ಎಲ್ಲಿಗೆ ಹೊರಟಿದ್ದರು ಎನ್ನುವುದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!