ಪ್ರಜಾಸ್ತ್ರ ಸುದ್ದಿ
ಮುಜಾಫರನಗರ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 6 ಜನರು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರನಗರದ ರಾಷ್ಟ್ರೀಯ ಹೆದ್ದಾರಿ 58ರಲ್ಲಿ ನಡೆದಿದೆ.
ಭೀಕರ ಅಪಘಾತದಿಂದಾಗಿ ಕಾರಿನಲ್ಲಿದ್ದ 6 ಜನರು ಮೃತಪಟ್ಟಿದ್ದಾರೆ. ಮೃತರು ದೆಹಲಿಯ ಶಹ್ದಾರ್ ಜಿಲ್ಲೆಯವರು ಎಂದು ತಿಳಿದು ಬಂದಿದೆ. ದೆಹಲಿಯಿಂದ ಹರಿದ್ವಾರಕ್ಕೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.