ಕಾರು ಅಪಘಾತ: ತಪ್ಪಿದ ಅನಾಹುತ

293

ಪ್ರಜಾಸ್ತ್ರ ಸುದ್ದಿ

ನಾಗಮಂಗಲ: ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ, ಬೆಳ್ಳೂರು ಕ್ರಾಸ್ ನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಯವಾಗಿಲ್ಲ.

ಬೆಂಗಳೂರಿನ ನಾಗರಭಾವಿ ನಿವಾಸಿಗಳಾದ ಅನಿಲ ಮತ್ತು ಅವರ ಕುಟುಂಬಸ್ಥರು ಶ್ರೀಮಂಜುನಾಥ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಸಂದರ್ಭದಲ್ಲಿ, ಕಾರಿನ ಹಿಂಬದಿ ಚಕ್ರದ ಬೇರಿಂಗ್ ಕಟ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ರಿಂದ ಕಾರಿನಲ್ಲಿದ್ದ ಐವರು ಸ್ವಲ್ಪದರಲ್ಲೇ ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!