ಪ್ರಜಾಸ್ತ್ರ ಸುದ್ದಿ
ಹೈದರಾಬಾದ್: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಿಆರ್ ಎಸ್ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟ ಘಟನೆ ಓಆರ್ ಆರ್ ನಲ್ಲಿ ನಡೆದಿದೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಈ ಹಿಂದೆಯೂ ಒಮ್ಮೆ ಅಪಘಾತದಲ್ಲಿ ಗಾಯಗೊಂಡಿದ್ದರು. ಮತ್ತೆ ಲಿಫ್ಟ್ ನಲ್ಲಿ ಸಿಲುಕಿದ್ದರು. ಇದಾದ ಬಳಿಕ ಮತ್ತೊಮ್ಮೆ ಕಾರು ಅಪಘಾತ ನಡೆದು ಅದೃಷ್ಟವಶಾತ್ ಬಚಾವ್ ಆಗಿದ್ದರು. ಆದರೆ, ಇಂದು ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿಯೇ ಮೃತಪಟ್ಟಿರುವುದು ನಿಜಕ್ಕೂ ದುರಂತ.
ಅತಿ ವೇಗವೆ ಕಾರು ಅಪಘಾತಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಬಿಆರ್ ಎಸ್ ಪಕ್ಷ ಶಾಸಕಿಯ ನಿಧನಕ್ಕೆ ಸಂತಾಪ ಸೂಚಿಸಿದೆ. 1986ರಲ್ಲಿ ಜನಿಸಿದ ಲಾಸ್ಯ 10 ವರ್ಷಗಳ ಹಿಂದೆಯೇ ರಾಜಕೀಯಕ್ಕೆ ಬಂದಿದ್ದರು. 2023ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಬಾದ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿಯ ಗಣೇಶ್ ಎನ್ ವಿರುದ್ಧ 17,169 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.