ಪ್ರಜಾಸ್ತ್ರ ಸುದ್ದಿ
ಬೀದರ: ಒಂದೂವರೆ ವರ್ಷದ ಮಗುವಿನ ಮೇಲೆ ಕಾರು ಹರಿದು ಮೃತಪಟ್ಟಿರುವ ಘಟನೆ ಪಟ್ಟಣದ ಹಾರೂರಗೇರೆ ಹತ್ತಿರ ನಡೆದಿದೆ. ಬಸವಚೇತನ್ ಎನ್ನುವ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.
ಡಾ.ಗುರುಪಾದಪ್ಪ ನಾಗಮಾರಪ್ಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ಸಂಜೆ ಘಟನೆ ನಡೆದಿದೆ. ಕಾರು ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತಾ ವಾಹನ ಓಡಿಸಿದ್ದಾನೆ. ಈ ವೇಳೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದಿದೆ. ಇದರಿಂದಾಗಿ ಸ್ಥಳದಲ್ಲೇ ಮಗು ಮೃತಪಟ್ಟಿದೆ.