ಕಾರು ಅಪಘಾತದಲ್ಲಿ ನವ ದಂಪತಿ ಸಾವು

193

ಪ್ರಜಾಸ್ತ್ರ ಸುದ್ದಿ

ತುಮಕೂರು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಹತ್ತಿರ ನಡೆದಿದೆ. ರಘು(35) ಹಾಗೂ ಪತ್ನಿ ಅನುಷಾ(28) ಮೃತ ದುರ್ದೈವಿಗಳು.

ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಬದುಕುಳಿದಿದ್ದಾನೆ. ಹಾಸನ ಜಿಲ್ಲೆ ಅರಸಿಕೆರೆ ಮೂಲದ ರಘು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕು ತಿಗಡನಹಳ್ಳಿಯ ಅನುಷಾ ಮದುವೆ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ನಡೆದಿತ್ತು. ಸಂಬಂಧಿಕರೊಬ್ಬರ ಮದುವೆಗೆ ಹೊರಟಿದ್ದಾಗ ಈ ದುರಂತ ನಡೆದಿದೆ.

ಘಟನೆಯ ವೇಳೆ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!