ಪ್ರಜಾಸ್ತ್ರ ಸುದ್ದಿ
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ಕಾರೊಂದು ನುಗ್ಗಿದ ಪರಿಣಾಮ ಸ್ಥಳದಲ್ಲಿಯೇ ಚಾಲಕ ಸಾವನ್ನಪ್ಪಿದ ಘಟನೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಬಳಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣ ನಿವಾಸಿ ಮಾರುತಿ ಹೊಸೂರ(30) ಮೃತ ಚಾಲಕ ಎಂದು ತಿಳಿದು ಬಂದಿದೆ. ಇನ್ನು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದೆ ವೇಳೆ ಮನೆಯಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.