ಪ್ರಜಾಸ್ತ್ರ ಸುದ್ದಿ
ಕೋಲ್ಹಾರ: ವಿಜಯಪುರ ಜಿಲ್ಲೆ ಕೋಲ್ಹಾರ ತಾಲೂಕಿನ ಮುಳವಾಡ ತಾಂಡ ಹಾಗೂ ಕುಬಕ್ಕಡಿ ಕ್ರಾಸ್ ಬಳಿ ಕಾರ್ ಅಪಘಾತ ಸಂಭವಿಸಿದೆ. ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಈ ಒಂದು ಕಾರ್ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಲ್ಹಾರ ಪಟ್ಟಣದ ನಿವಾಸಿಗಳಾದ ಡಾ. ರಾಚಯ್ಯ ಮಠ, ಚಿದಾನಂದ ಮಠ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು. ಕೋಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.