ಪ್ರಜಾಸ್ತ್ರ ಸುದ್ದಿ
ನಾಗಮಂಗಲ: ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯ ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿರುವ ಕಾಫಿ ಡೇ ಹತ್ತಿರ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದನ್ನ ತಪ್ಪಿಸಲು ಹೋದಾಗ ಕಾರು ನದಿಗೆ ಬಿದ್ದಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಹೊರಟಿದ್ದ ಕಾರು ವೀರವೈಷ್ಣವಿ ನದಿಗೆ ಬಿದ್ದಿದೆ.
ಈ ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಆಗಿಲ್ಲ. ಸತೀಶಕುಮಾರ, ಮಂಜುನಾಥ, ಉಮೇಶ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬೆಳ್ಳೂರು ಪೊಲೀಸ್ ಠಾಣೆಯ ಪಿಎಸ್ಐ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ಸಂಬಂಧ ಪ್ರಕರಣ ದಾಖಲಾಗಿದೆ.