ಅಪಘಾತದಲ್ಲಿ ಗರಗ ಪಿಎಚ್ಸಿ ವೈದ್ಯ ಸಾವು

317

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರಗ ಪಿಎಸ್ ಸಿ ವೈದ್ಯರೊಬ್ಬರು ಮೃತಪಟ್ಟಿದ್ದಾರೆ. ಡಾ.ರಾಜಶೇಖರ್ ಪತ್ತಾರ ಮೃತ ವೈದ್ಯ ಎಂದು ತಿಳಿದು ಬಂದಿದೆ. ಹೊಸ ಬಸ್ ನಿಲ್ದಾಣದ ಹತ್ತಿರ ಈ ಘಟನೆ ನಡೆದಿದೆ.

ಕೆಲಸ ಮುಗಿಸಿಕೊಂಡು ಗರಗ ಗ್ರಾಮದಿಂದ ಬರುವಾಗ ಬಸ್ ಹಿಂಭಾಗ ಡಿಕ್ಕಿಯಾಗಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!