ಪ್ರಜಾಸ್ತ್ರ ಸುದ್ದಿ
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಯಪುರ ಹೋಬಳಿ ಬಳಿ ನಡೆದಿದೆ. ಹೆಚ್.ಡಿ ಕೋಟೆ ತಾಲೂಕಿನ ಅಲತ್ತೂರ ಗ್ರಾಮದ ಶಿವು ಹಾಗೂ ಬೋಗದಿಯ ನಂದನ ಮೃತ ದುರ್ದೈವಿಗಳು.
ಕೆಲಸ ಮುಗಿಸಿಕೊಂಡು ಇವರಿಬ್ಬರು ಊರಿನಂತ್ತ ಹೊರಟಿದ್ರು. ಈ ವೇಳೆ ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಇದ್ರಿಂದಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.