ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರಿಗೆ ಸೇರಿದ ಕಾರಿನ ಬಾಗಿಲು ಬಡೆದು ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಪ್ರಕಾಶ್(60) ಮೃತ ದುರ್ದೈವಿ. ಚುನಾವಣೆ ಪ್ರಚಾರಕ್ಕೆಂದು ಕೆ.ಆರ್ ಪುರಕ್ಕೆ ಕರಂದ್ಲಾಜೆ ಬಂದಿದ್ದರು. ಅವರಿಗೆ ಸೇರಿದ ಕಾರನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕಾರು ಚಾಲಕ ದಿಢೀರ್ ಕಾರಿನ ಬಾಗಿಲು ತೆರೆದಿದ್ದಾನೆ. ಈ ವೇಳೆ ಬೈಕ್ ನಲ್ಲಿ ಬರುತ್ತಿದ್ದ ಪ್ರಕಾಶನಿಗೆ ತಾಗಿ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಬಸ್ ಅವರ ಮೇಲೆ ಹರಿದಿದೆ. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲೇ ಆತ ಮೃತಪಟ್ಟಿದ್ದಾನೆ. ಈ ಕುರಿಉ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿ ಯಾರೆಲ್ಲ ಇದ್ದರು ಅನ್ನೋದು ತಿಳಿದುಕೊಂಡು ಅವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.