ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಯಲಹಂಕದ ಕೋಗಿಲು ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗಮಧ್ಯ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ಮಂಜುನಾಥ(33) ಮೃತ ವ್ಯಕ್ತಿಯಾಗಿದ್ದಾರೆ. ಟೊಯೊಟಾ ಇನೋವಾ ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಆಕ್ಟಿವಾ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಜೊತೆಗೆ ಕಾರಿನೊಂದಿಗೆ ಸ್ಕೂಟರ್ ಎಳೆದುಕೊಂಡು ಕಿಲೋ ಮೀಟರ್ ವರೆಗೂ ಹೋದ ಪರಿಣಾಮ ಈ ದುರ್ಘಟನೆ ನಡೆದಿದೆ.
ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಚಲಾಯಿಸಿದ್ದು ಯಾರು? ಯುಟೂರ್ನ್ ತೆಗೆದುಕೊಳ್ಳುವಾಗ ಎಷ್ಟೊಂದು ವೇಗದಲ್ಲಿದ್ದರು ಅನ್ನೋದು ಸೇರಿದಂತೆ ಸಾವಿನ ಕುರಿತು ಪೊಲೀಸ್ ತನಿಖೆ ನಡೆಸಲಾಗುತ್ತಿದೆ.