ಕಾರು-ಬೈಕ್ ಅಪಘಾತ: ಇಬ್ಬರ ಸಾವು

385

ಪ್ರಜಾಸ್ತ್ರ ಸುದ್ದಿ

ದೊಡ್ಡಬಳ್ಳಾಪುರ: ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ತಾಲೂಕಿನ ಗೌರಿಬಿದನೂರು-ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದಿದೆ. ವಕೀಲ ಬಾಲಗಂಗಾಧರಯ್ಯ(61) ಹಾಗೂ ಕಕ್ಷಿದಾರ ಶಿವಶಂಕರಯ್ಯ(54) ಮೃತ ದುರ್ದೈವಿಗಳು.

ದೊಡ್ಡಬಳ್ಳಾಪುರದಿಂದ ಹಿಂದೂಪರಕ್ಕೆ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!