ಪ್ರಜಾಸ್ತ್ರ ಸುದ್ದಿ
ವಿಜಯಪುರ: ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಬೇವನೂರು ಬಸ್ ನಿಲ್ದಾಣ ಹತ್ತಿರ ನಡೆದಿದೆ. ಘಟನೆಯಲ್ಲಿ ಶಿಕ್ಷಕ ಶಿವಪ್ಪ ಈರಪ್ಪ ಜಾಮಗೊಂಡ ಹಾಗೂ ವಿದ್ಯಾರ್ಥಿ ರಾಹುಲ್ ಅಶೋಕ್ ನಾಯ್ಕೋಡಿ ಮೃತಪಟ್ಟಿದ್ದಾರೆ.
ಇಂಡಿ ರೈಲ್ವೆ ಮಾರ್ಗವಾಗಿ ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರ ಪ್ರಾಣ ಹೋಗಿದೆ. ಕಾರು ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.