ಪಡಗಾನೂರ ಕ್ರಾಸ್ ಹತ್ತಿರ ಕಾರು-ಬೈಕ್ ಅಪಘಾತದಲ್ಲಿ ಇಬ್ಬರ ಸಾವು

339

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ: ಪಟ್ಟಣದ ಪಡಗಾನೂರ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಪಡಗಾನೂರ ತಾಂಡಾದ ನಿವಾಸಿಗಳಾದ ಬಾಬು ಬೋಜು ರಾಠೋಡ (35), ಸೀತಾರಾಂ ದೇಸು ರಾಠೋಡ (45) ಮೃತ ದುರ್ದೈವಿಗಳು.

ವಿಜಯಪುರ ಮಾರ್ಗದಿಂದ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಕಾರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!