ಪ್ರಜಾಸ್ತ್ರ ಸುದ್ದಿ
ಮೈಸೂರು: ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ರಸ್ತೆಯ ದಂಡಿ ಮಾರಮ್ಮ ದೇವಸ್ಥಾನದ ಹತ್ತಿರ ನಡೆದಿದೆ.
ಟಿಕೆ ಲೇಔಟ್ ನಿವಾಸಿ ರಮೇಶ, ಪತ್ನಿ ಉಷಾ, ಪುತ್ರಿ ಮೋನಿಷಾ ಹಾಗೂ ಪುತ್ರ ಸಿದ್ಧಾರ್ಥ ಬೈಕ್ ನಲ್ಲಿ ಹೊರಟಿದ್ರು. ವೇಗವಾಗಿ ಬರ್ತಿದ್ದ ಕಾರವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದ್ರಿಂದಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಿದ್ಧಾರ್ಥ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.