ಕಾರು-ಬೈಕ್ ಅಪಘಾತ: ಇಬ್ಬರಿಗೆ ಗಂಭೀರ ಗಾಯ

248

ಪ್ರಜಾಸ್ತ್ರ ಸುದ್ದಿ

ಬಸವನಬಾಗೇವಾಡಿ: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಬಸವನಹಟ್ಟಿ ಕ್ರಾಸ್ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಎರಡು ವಾಹನಗಳು ಹೊತ್ತಿ ಉರಿದಿವೆ. ಇದ್ರಿಂದಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರ ಮಂಜು‌ ಎಂಬಾತನಿಗೆ ಬೆಂಕಿಯಿಂದಾಗಿ ಗಂಭೀರ ಗಾಯಗಳಾಗಿವೆ. ಇನ್ನು ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಳೆದ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಸವನಬಾಗೇವಾಡಿ‌ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!