ಪ್ರಜಾಸ್ತ್ರ ಸುದ್ದಿ
ಬಸವನಬಾಗೇವಾಡಿ: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಬಸವನಹಟ್ಟಿ ಕ್ರಾಸ್ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಎರಡು ವಾಹನಗಳು ಹೊತ್ತಿ ಉರಿದಿವೆ. ಇದ್ರಿಂದಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಬೈಕ್ ಸವಾರ ಮಂಜು ಎಂಬಾತನಿಗೆ ಬೆಂಕಿಯಿಂದಾಗಿ ಗಂಭೀರ ಗಾಯಗಳಾಗಿವೆ. ಇನ್ನು ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಳೆದ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಸವನಬಾಗೇವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.