ನಿಂತಿದ್ದ ಬಸ್ಸಿಗೆ ಕಾರು ಡಿಕ್ಕಿ, ನಾಲ್ವರ ಸಾವು

242

ಪ್ರಜಾಸ್ತ್ರ ಸುದ್ದಿ

ಮಂಡ್ಯ: ನಿಂತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ ನಗರದ ಹತ್ತಿರ ಬುಧವಾರ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಂಗಳೂರಿನ ನಮಿತಾ, ವಂಶಿಕೃಷ್ಣ, ಧಾರವಾಡದ ರಘುನಾಥ್ ಭಜಂತ್ರಿ ಹಾಗೂ ರಾಜಸ್ತಾನ ಮೂಲದ ಪಂಕಜ್ ಶರ್ಮಾ ಮೃತ ದುರ್ದೈವಿಗಳು.

ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಬಳಿ ಪ್ರಯಾಣಿಕರನ್ನು ಇಳಿಸಲು ಬಸ್ ನಿಂತಿದೆ. ಚನ್ನರಾಯಪಟ್ಟಣ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಸ್ವಿಫ್ಟ್ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದರಂತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!