ಪ್ರಜಾಸ್ತ್ರ ಸುದ್ದಿ
ಶಿರಾ: ಕಾರೊಂದು ಕೆರೆಗೆ ಉರುಳಿಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ತಾಲೂಕಿನ ರಾಮಲಿಂಗಾಪುರದಲ್ಲಿ ನಡೆದಿದೆ.
ಮೇಕೆರಹಳ್ಳಿ ಗ್ರಾಮದ ಪ್ರವೀಣ್, ಪತ್ನಿ ಯಮುನಾ, ಮಾವ ದೊಡ್ಡಣ್ಣ, ಅತ್ತೆ ಚಿಕ್ಕಮ್ಮ ಅವರು ಧರ್ಮಸ್ಥಳಕ್ಕೆ ಹೊರಟಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಾಮಲಿಂಗಾಪುರದ ಕೆರೆಗೆ ಬಿದ್ದಿದೆ.
ಪ್ರವೀಣ್ ಈಜಿ ದಡ ಸೇರಿದ್ದಾರೆ. ಪ್ರವೀಣ್ ಪತ್ನಿ ಯಮುನಾ ಕಾರು ಚಾಲನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.