ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮಗು ಸೇರಿ ನಾಲ್ವರ ಸಾವು

221

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿರುವ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ವಿಜಯಪುರ ತಾಲೂಕಿನ ಜುಮನಾಳ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ. ವಿಜಯಪುರ ನಗರದ ಪಿಡಿಜೆ ಶಾಲೆಯ ಶಿಕ್ಷಕ ಹಾಗೂ ಸಾಯಿ ಪಾರ್ಕ್ ನಿವಾಸಿ ಕುಟುಂಬ ಮೃತಪಟ್ಟಿದೆ.

ಮಂಜುನಾಥ ಮುಂಡೆವಾಡಿ(42) ಪತ್ನಿ ಸಾವಿತ್ರಿ(37), ಮಗಳು ಆರಾಧ್ಯ (8) ಸಾವನ್ನಪ್ಪಿದ್ದಾರೆ. ಇನ್ನು ಲಾರಿ ಪಕ್ಕದಲ್ಲಿ ನಿಂತಿದ್ದ ಚಾಲಕ ಸಹ ಮೃತಪಟ್ಟಿದ್ದಾನೆ. ಹೆಸರು ತಿಳಿದು ಬಂದಿಲ್ಲ. ಇನ್ನು ಕಾರಿನಲ್ಲಿದ್ದ ಇತರೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!