ಕಾರ್ ಟಯರ್ ಬ್ಲಾಸ್ಟ್: ಮೂವರಿಗೆ ಗಾಯ

129

ಪ್ರಜಾಸ್ತ್ರ ಸುದ್ದಿ

ರಾಮನಗರ: ಚಾಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ಮೂವರು ಗಾಯಗೊಂಡಿರುವ ಘಟನೆ ಕೆಂಪನಹಳ್ಳಿ ಗ್ರಾಮದ ಹತ್ತಿರ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯದಿಂದ ಬೆಂಗಳೂರಿಗೆ ಹೊರಟಿದ್ದ ವೇಳೆ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹತ್ತಿರದ ಕೆಂಪನಹಳ್ಳಿಯ ಬಳಿ ಈ ಘಟನೆ ನಡೆದಿದೆ. ಟಯರ್ ಸ್ಫೋಟದಿಂದಾಗಿ ಕಾರು ನಿಯಂತ್ರಣಕ್ಕೆ ಸಿಗದೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬಿಡದಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!