ಪ್ರಜಾಸ್ತ್ರ ಸುದ್ದಿ
ಮೈಸೂರು: ಮೈಸೂರು-ಮಂಗಳೂರು ರಾಷ್ಟ್ರೀಯ ಹದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪರಿಯಾಪಟ್ಟಣದ ಕಂಪಲಾಪುರ ಗ್ರಾಮದ ಹತ್ತಿರ ಈ ಅಪಘಾತ ಸಂಭವಿಸಿದೆ. ಮುಜಾಹಿದ್, ಅಹ್ಮದ್ ಪಾಷಾ, ಮುದಾಸಿರ್ ಮೃತ ದುರ್ದೈವಿಗಳು. ಗಾಯಾಳುಗಳನ್ನು ಪರಿಯಾಣಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.