ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೂರು ದಾಖಲಿಸಿದೆ.
ಸಂವಿಧಾನ ದಿನಕ್ಕೆ ನಟಿ ರಚಿತಾ ರಾಮ್ ಅಪಮಾನ ಮಾಡಿದ್ದಾರೆ. ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿ ಪಾರು ಮಾಡಿ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದಾಗಿ ನಟಿಗೆ ಸಂಕಷ್ಟ ಶುರುವಾಗಿದೆ.
ಡಿಸೆಂಬರ್ 26ರಂದು ನಟ ದರ್ಶನ್ ಹಾಗೂ ನಟಿ ರಚಿತಾ ರಾಮ್ ನಟನೆಯ ಕ್ರಾಂತಿ ಸಿನಿಮಾ ರಿಲೀಸ್ ಆಗುತ್ತಿದೆ. ಚಿತ್ರದ ಪ್ರಮೋಷನ್ ವೇಳೆ ಮಾತನಾಡಿದ ನಟಿ ರಚಿತಾ ರಾಮ್, ಇಷ್ಟು ವರ್ಷ ಜನವರಿ 26 ಅಂದರೆ ರಿಪಬ್ಲಿಕ್ ಡೇ. ಆದರೆ ಈ ವರ್ಷ ಗಣರಾಜ್ಯೋತ್ಸವ ಅನ್ನೋದು ಮರೆತು ಬಿಡಿ ಬರೀ ಕ್ರಾಂತಿ ಉತ್ಸವ ಅಷ್ಟೇ ಎಂದಿದ್ದಾರೆ. ಅದು ಸಿಕ್ಕಾಪಟ್ಟೆ ವೈರಲ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ನಟಿ ವಿರುದ್ಧ ಆಕ್ರೋಶ ವ್ಯಕ್ತವಾಗಿ ಈಗ ಪೊಲೀಸ್ ಠಾಣೆವರೆಗೂ ಬಂದಿದೆ.