ಸಾವರ್ಕರ್ ಫೋಟೋಗೆ ಬೆಂಕಿ: ಕೈ ಕಾರ್ಯಕರ್ತರ ವಿರುದ್ಧ ಕೇಸ್

287

ಪ್ರಜಾಸ್ತ್ರ ಸುದ್ದಿ

ಧಾರವಾಡ: ಸಾವರ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ದೊಡ್ಡ ಮಟ್ಟದ ರಾಜಕೀಯ ನಡೆದಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಶುಕ್ರವಾರದಂದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಸಾವರ್ಕರ್ ಫೋಟೋಗೆ ಬೆಂಕಿ ಹಚ್ಚಿದ್ದರು.

ಈ ಘಟನೆ ಸಂಬಂಧ ಶಿವಾನಂದ ಸತ್ತಿಗೇರಿ ಎಂಬುವರು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ 12 ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸಿ ಎಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!