ಸಚಿವ ತಂಗಡಗಿ ವಿರುದ್ಧ ದೂರು

61

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಲೋಕಸಭೆ ಚುನಾವಣೆ ಕಣದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಪರ ಪ್ರಚಾರ ಮಾಡುವು ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿರುದ್ಧ ದೂರು ದಾಖಲಾಗಿದೆ.

ಕಾರಟಗಿ ಪೊಲೀಸ್ ಠಾಣೆಯಲ್ಲಿ ಗಂಗಾವತಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಗ್ಯಾನನಗೌಡ ನಂದನಗೌಡ ದೂರು ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ನಂದನಗೌಡ ದೂರು ಸಲ್ಲಿಸಿದ್ದಾರೆ.

ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು ಎಂದು ನಿನ್ನ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇದನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!