ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಕಳೆದ ನವೆಂಬರ್ 25ರಂದು ಅಂಧ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಮಾಡಿದ್ದಾರೆ ಎನ್ನುವ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಬುಧವಾರ ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ ಎಸ್ಪಿ ಯಶೋಧಾ ವಂಟಗೋಡಿ, ವೃದ್ಧ ಹುಸೇನಸಾಬ್ ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನುವುದಕ್ಕೆ ಆಧಾರವಿಲ್ಲ. ಜೈ ಶ್ರೀರಾಮ್ ಎಂದು ಹೇಳುವಂತೆ ಬಲವಂತ ಮಾಡಿದ್ದಾರೆ ಎನ್ನುವುದಕ್ಕೂ ಸಾಕ್ಷಿ ಇಲ್ಲ. ಮದ್ಯ ಸೇವೆಸಿದ್ದ ಆರೋಪಿಗಳ ಬಳಿ ವೃದ್ಧ ಡ್ರಾಪ್ ಕೇಳಿದ್ದಾನೆ. ಬೈಕ್ ಮೇಲೆ ಕರೆದುಕೊಂಡು ಹೋಗುವಾಗ ನರಸಪ್ಪ ವೃದ್ಧನ ಟೋಪಿ ಜಗ್ಗಿದ್ದಾನೆ.
ಈ ವೇಳೆ ವೃದ್ಧ ಹುಸೇನಸಾಬ್ ಕೋಪಗೊಂಡಿದ್ದಾನೆ. ಆಗ ಆರೋಪಿಗಳು ರೈಲ್ವೆ ಸೇತುವೆ ಹತ್ತಿರ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ ಅಂತಾ ತಿಳಿಸಿದ್ದಾರೆ. ಈ ಘಟನೆ ಕುರಿತು ಎಲ್ಲೆಡೆ ಸಾಕಷ್ಟು ಆಕ್ರೋಶ ವ್ಯಕ್ತವಾಯಿತು. ಗಂಗಾವತಿಯ ಕುವೆಂಪು ಬಡಾವಣೆಯ ಸಾಫ್ಟ್ ವೇರ್ ಎಂಜಿನಿಯರ್ ಸಾಗರ ಶೆಟ್ಟಿ ಕಲ್ಕಿ, ಕಲ್ಲಪ್ಪನ ಕ್ಯಾಂಪಿನ ನರಸಪ್ಪ ದನಕಾಯರ ಬಂಧಿತ ಆರೋಪಿಗಳು.