ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ದೇಶದ ತಂಬಾ ಆಚರಿಸಲಾಯಿತು. ಇದರ ಪ್ರಯುಕ್ತ ಪ್ರತಿ ಮನೆ ಮೇಲೆ ತಿರಂಗ ಹಾರಿಸಲಾಯಿತು. ಇದರ ನಡುವೆ ಕೆಲ ಕಿಡಿಗೇಡಿಗಳು ದೇಶಕ್ಕೆ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆಗಳು ಅಲ್ಲಲ್ಲಿ ನಡೆದಿವೆ.
ಕಾಫಿ ನಾಡಿನಲ್ಲಿ ಕಿಡಿಗೇಡಿಯೊಬ್ಬ ರಾಷ್ಟ್ರಧ್ವಜವನ್ನು ಸಿಗರೇಟ್ ನಿಂದ ಸುಟ್ಟಿದ್ದ ಘಟನೆ ನಡೆದಿತ್ತು. ಅದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ನಗರದ ಬಾರ್ ಲೈನ್ ರಸ್ತೆಯ ಆರೋಪಿ ಅಸ್ಗರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.