ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ಸ್ವಲ್ಪ ನಿರಾಳ

117

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಯುತಿತ್ತು. ನಂತರ ಹೈಕೋರ್ಟ್ ಇದಕ್ಕೆ ತಡೆ ನೀಡಿತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಆ ಅರ್ಜಿಯ ವಿಚಾರಣೆ ಇಂದು ನಡೆಯಿತು.

ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಜುಲೈಗೆ ಮುಂದೂಡಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ಅಕ್ಟೋಬರ್ 3, 2020ರಲ್ಲಿ ಎಫ್ಐಆರ್ ದಾಖಲಿಸಿತ್ತು.

2023ರ ವಿಧಾನಸಭಾ ಚುನಾವಣೆಯಲ್ಲಿ ಡಿಕೆಶಿ ಘೋಷಿಸಿಕೊಂಡಿರುವ ಆಸ್ತಿ ಮೌಲ್ಯ 1,400 ಕೋಟಿ ರೂಪಾಯಿ. ಕರ್ನಾಟಕದಲ್ಲಿ ಸಾವಿರ ಕೋಟಿ ಆಸ್ತಿ ಮೀರಿದ ಶ್ರೀಮಂತ ರಾಜಕಾರಣಗಳಲ್ಲಿ ಇವರು ಒಬ್ಬರು. ಇದೀಗ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಜಟಾಪಟಿ ನಡೆದಿದೆ. ಸುಪ್ರೀಂ ಕೋರ್ಟ್ ಸಧ್ಯದ ಆದೇಶ ಡಿ.ಕೆ ಶಿವಕುಮಾರಗೆ ಸ್ವಲ್ಪ ನಿರಾಳ ತಂದಿದೆ.




Leave a Reply

Your email address will not be published. Required fields are marked *

error: Content is protected !!