ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಹಂ.ಪ ನಾಗರಾಜಯ್ಯ ಅವರು, ಕೇಂದ್ರ ಸರ್ಕಾರವನ್ನ ಟೀಕಿಸಿದ್ದಾರೆ ಅನ್ನೋ ಕಾರಣಕ್ಕೆ ಕೇಸ್ ದಾಖಲಿಸಲಾಗಿದೆ. ಅಲ್ದೇ, ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸಿರುವುದಕ್ಕೆ ಖಂಡನೆ ವ್ಯಕ್ತವಾಗಿದೆ.
ಜನವರಿ 17ರಂದು ಮಂಡ್ಯದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತ್ನಾಡಿದ್ರು. ಆಗ ಕೇಂದ್ರ ಸರ್ಕಾರವನ್ನ ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಸಿದ್ರು. ಈ ಸಂಬಂಧ ಬಿಜೆಪಿ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ರು. ಹೀಗಾಗಿ ಅವರನ್ನ ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸಿರುವುದಕ್ಕೆ ಖಂಡನೆ ವ್ಯಕ್ತವಾಗಿದೆ.