ಇನ್ಮುಂದೆ ಗ್ರಾಮಗಳಲ್ಲೇ ಜಾತಿ, ಆದಾಯ ಪ್ರಮಾಣ ಪತ್ರ

429

ಪ್ರಜಾಸ್ತ್ರ ಸುದ್ದಿ

ಹಾವೇರಿ: ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಪ್ರಮಾಣ ಪತ್ರ ಪಡೆಯಬೇಕು ಎಂದರೆ ತಾಲೂಕು ಕೇಂದ್ರಕ್ಕೆ ಬರಬೇಕು. ಆದರೆ, ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಶಿಗ್ಗಾಂವನ ಬಿಸನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರು ತಾಲೂಕು ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು 2022ರ ಗಣರಾಜ್ಯೋತ್ಸವದಂದು ಗ್ರಾಮ ಪಂಚಾಯ್ತಿಗಳಿಗೆ ಅಕಾರ ನೀಡಲಾಗುತ್ತಿದೆ. ಇದಕ್ಕಾಗಿ ಇಂಟರ್ ನೆಟ್ ಸೇರಿದಂತೆ ಎಲ್ಲ ರೀತಿಯ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!