ಪ್ರಜಾಸ್ತ್ರ ಸುದ್ದಿ
ಜೈಪುರ: ಇದೀಗ ಎಲ್ಲೆಡೆ ಜಾತಿ ಗಣತಿಯ ಚರ್ಚೆ ಜೋರಾಗಿದೆ. ರಾಜಕೀಯ ಹಿತಾಸಕ್ತಿಯ ಕಾರಣಕ್ಕೆ ದಶಕಗಳಿಂದ ಜಾತಿ ಗಣತಿಗೆ ಯಾರೂ ಮುಂದಾಗಿಲ್ಲ. ಹೀಗಾಗಿ ರಾಜ್ಯದಲ್ಲಿ, ದೇಶದಲ್ಲಿ ಈ ಕುರಿತು ಚರ್ಚೆ ನಡೆದಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು. ಜಾತಿ ಗಣತಿ ದೇಶದ ಎಕ್ಸ್ ರೇ ಇದ್ದಂತೆ ಎಂದಿದ್ದಾರೆ.
ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಿದ್ದೇವೆ. ಇದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಬಂದರೆ ಜಾತಿ ಗಣತಿ ನಡೆಯಲಿದೆ ಎಂದರು. ಬಿಹಾರದಲ್ಲಿ ಜಾತಿ ಗಣತಿ ನಡೆದಂತೆ ರಾಜಸ್ಥಾನದಲ್ಲಿಯೂ ನಡೆಸಲಾಗುವುದು ಎಂದು ಸಿಎಂ ಅಶೋಕ್ ಗೆಹ್ಲೋತ್ ಹೇಳಿದರು.