ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಚಿವರು, ಸರ್ವಪಕ್ಷ ಸಂಸದರ ಸಭೆ ನಡೆಯುತ್ತಿದೆ.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಸುಪ್ರೀಂ ಕೋರ್ಟ್ ವಕೀಲರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಈ ಸಭೆಯ ಸಂಬಂಧ ಮಂಗಳವಾರ ರಾತ್ರಿಯೇ ರಾಜ್ಯ ನಾಯಕರು ದೆಹಲಿಗೆ ತೆರಳಿದ್ದರು. ಇದೀಗ ಸಭೆ ಪ್ರಾರಂಭವಾಗಿದೆ. ಕಾವೇರಿ ಪ್ರದೇಶದ ಶಾಸಕರು, ಸಚಿವರು, ರಾಜ್ಯಸಭಾ, ಲೋಕಸಭಾ ಸದಸ್ಯರು, ಕಾನೂನು ತಂಡ ಹಾಜರಿದೆ.