ಇಂಡಿಯಾ ಒಕ್ಕೂಟಕ್ಕಾಗಿ ತಮಿಳುನಾಡಿಗೆ ನೀರು: ಯಡಿಯೂರಪ್ಪ

156

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಇಂಡಿಯಾ ಒಕ್ಕೂಟಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರು ಹರಿಸುತ್ತಿದ್ದಾರೆ. ಇವರು ಕರ್ನಾಟಕದ ಮುಖ್ಯಮಂತ್ರಿಯೋ ತಮಿಳುನಾಡಿನ ಮುಖ್ಯಮಂತ್ರಿಯೋ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂಡಿಯಾ ಒಕ್ಕೂಟ ಬಲಪಡಿಸುವ ದೃಷ್ಟಿಯಿಂದ ನಿತ್ಯ 5000 ಕ್ಯೂಸಿಕ್ ನೀರು ಬಿಡುತ್ತಿದೆ. ಸಿಎಂ, ಡಿಸಿಎಂ ಮೊದಲೇ ಸುಪ್ರಿಂ ಕೋರ್ಟ್ ಮೆಟ್ಟಿಲು ಏರಬೇಕಿತ್ತು. ಇದನ್ನು ಮಾಡದೆ ತಮಿಳುನಾಡನ್ನು ಸಂತೋಷ ಪಡಿಸಲು ಈ ರೀತಿ ಮಾಡುತ್ತಿದ್ದಾರೆ ಎಂದರು.

ತಮಿಳುನಾಡಿನಲ್ಲಿ 2ನೇ ಬೆಳೆ ಬೆಳೆಯಲಾಗುತ್ತಿದೆ. ನಮ್ಮಲ್ಲಿ ದಿನದಿಂದ ದಿನಕ್ಕೆ ರೈತರ ಪರಿಸ್ಥಿತಿ ಹದಗೆಡುತ್ತಿದೆ. ಈಗ್ಲಾದರೂ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಬೇಕು. ಈ ಮೂಲಕ ರಾಜ್ಯದ ಜನರ ಹಿತ ಕಾಪಾಡಬೇಕು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!