ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಟರ್ಮಿನಲ್ 1ರ ನರ್ಗಮನ ಗೇಟಿನ ಮೂಲಕ ಮುತ್ತಿಗೆಗೆ ಯತ್ನಿಸಿದ್ದಾರೆ. ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗಿದೆ.