ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಸೋಲಾಗಿದೆ. ನವೆಂಬರ್ 1ರಿಂದ 15ರ ತನಕ ನಿತ್ಯ 2,300 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.
ಸೋಮವಾರ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಒಟ್ಟಿನಲ್ಲಿ ರಾಜ್ಯದಲ್ಲಿ ಎಷ್ಟೇ ದೊಡ್ಡ ಮಟ್ಟದ ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ರಾಜ್ಯ ಸರ್ಕಾರ ಎಲ್ಲಿ ಯಡವುತ್ತಿದೆ ಅನ್ನೋ ಯಕ್ಷ ಪ್ರಶ್ನೆ ಕಾಡುತ್ತಿದೆ.