ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹಾಗೂ ಸಂಸದ ಡಿ.ಕೆ ಸುರೇಶ ಸಹೋದರರಿಗೆ ಸಿಬಿಐ ಸಮನ್ಸ್ ನೀಡಿದೆ. ಕಳೆದ ತಿಂಗಳು ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐಗೆ ನೋಟಿಸ್ ನೀಡಿದೆ.
ನವೆಂಬರ್ 23ರಂದು ವಿಚಾರಣೆಗೆ ಬರಬೇಕೆಂದು ನೋಟಿಸ್ ನೀಡಲಾಗಿದೆ. ಆದ್ರೆ, ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಕಾರಣ ನವೆಂಬರ್ 25ರಂದು ಬರುತ್ತೇನೆಂದು ತಿಳಿಸಿದ್ದೇನೆ ಎಂದಿದ್ದಾರೆ. ಡಿಸೆಂಬರ್ 5ರಂದು ಸಿಬಿಐ ಅಧಿಕಾರಿಗಳು ಡಿಕೆಶಿ ಮನೆ ಮೇಲೆ ದಾಳಿ ನಡೆಸಿ, ಇಡೀ ದಿನ ಪರಿಶೀಲನೆ ನಡೆಸಿದ್ರು.