ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕನಕಪುರದ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ವಿಚಾರದಲ್ಲಿ ಇಡಿಯಿಂದ ವಿಚಾರಣೆ ಎದುರಿಸುತ್ತಲೇ ಇದ್ದಾರೆ. ಒಮ್ಮೆ ಜೈಲಿಗೂ ಹೋಗಿ ಬಂದಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಈಗ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ.