ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಸಿದ್ದು, ಡಿಕೆಶಿ ವಾಗ್ದಾಳಿ

269

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗೆ ಜಿಲ್ಲೆಯ ಘಟನೆಯ ತನಿಖೆ ಹಂತದಲ್ಲಿರುವಾಗ್ಲೇ ಇದೀಗ ಮತ್ತೊಂದು ಅತಂಹದ್ದೆ ಘಟನೆ ನಡೆದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.

ಘಟನೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಿಡಿ ಕಾರಿದ್ದಾರೆ. ಶಿವಮೊಗದ ಜಿಲೆಟಿನ್ ಸ್ಫೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಫೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಪಾಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕೂಡಾ ಘಟನೆಯನ್ನ ಖಂಡಿಸಿದ್ದು, ಸರ್ಕಾರದ ಅಸಡ್ಡೆಗೆ ಇನ್ನಷ್ಟು ಜನಗಳು ಬಲಿಯಾಗಬೇಕು ಎಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಅನ್ನೋದು ಹಾಸ್ಯಸ್ಪದವಾಗಿದೆ. ಹೇಳಿಕೆ ನೀಡುವ ಸರ್ಕಾರದ ಪ್ರತಿನಿಧಿಗಳು ಜೋಕರ್ ಗಳಂತೆ ಕಾಣುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!