ಸಿಡಿ ಕೇಸ್: ಜಾರಕಿಹೊಳಿಗೆ ಮತ್ತೆ ಸಂಕಷ್ಟ ಶುರು

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನವನ್ನೇ ಕಳೆದುಕೊಂಡ ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಿ ರಿಪೋರ್ಟ್ ನ್ನು ಹೈಕೋರ್ಟ್ ಸಲ್ಲಿಸಿದ್ದಾರೆ. ಆದರೆ, ಇದನ್ನು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಎಸ್ಐಟಿಯನ್ನು ಸರ್ಕಾರ ಸರಿಯಾಗಿ ರಚನೆ ಮಾಡಿಲ್ಲ. ಇದೊಂದು ಕಾನೂನು ಬಾಹಿರ. ಹೀಗಿರುವಾಗ ಅದರ ವರದಿಯನ್ನು ಕೋರ್ಟ್ ಗೆ ಸಲ್ಲಿಸುವುದು ಎಷ್ಟು ಸರಿ ಎಂದು ಹೇಳಿ ಸುಪ್ರೀ ಕೋರ್ಟ್ ಕದ ತಟ್ಟಿದ್ದಾರೆ. ಈ ವರದಿ ಮೇಲೆ ನನಗೆ ನಂಬಿಕೆಯಿಲ್ಲವೆಂದು ಯುವತಿ ಹೇಳಿದ್ದಾಳೆ.

ಕೆಲಸ ಕೊಡಿಸುವ ನೆಪದಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ದೇ, ಸಿಡಿಯೊಂದು ಎಲ್ಲೆಡೆ ಹರಿದಾಡಿ ವೈರಲ್ ಆಗಿತ್ತು. ಈಗ ಯುವತಿ ಸುಪ್ರೀಂ ಕೋರ್ಟಿಗೆ ಹೋಗಿರುವುದರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.




Leave a Reply

Your email address will not be published. Required fields are marked *

error: Content is protected !!