ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಯುವತಿಯೊಬ್ಬಳು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಾಕಂದರೆ, ತನಿಖಾ ತಂಡ ಬಿ ರಿಪೋರ್ಟ್ ಸಲ್ಲಿಸಿದೆ.
ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆ ನಡೆಸಲಾಗಿತ್ತು. ಅತ್ಯಾಚಾರ ನಡೆಸಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳು ಸಿಗದೆ ಹಿನ್ನೆಲೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಯುವತಿ ಪರ ವಕೀಲರು ಪ್ರೊಟೆಸ್ಟ್ ಪಿಟಿಷನ್ ಸಲ್ಲಿಸಲು ನಿರ್ಧಾರಿಸಿದ್ದಾರಂತೆ.