ಪ್ರಜಾಸ್ತ್ರ ಸುದ್ದಿ
ನವದೆಹಲಿ: ಹೆಲಿಕಾಪ್ಟರ್ ಪತನದಲ್ಲಿ ಮೃತರಾದ ಸಿಡಿಎಸ್ ಬಿಪಿನ್ ರಾತವ್, ಅವರ ಪತ್ನಿ ಮಧುಲಿಕಾ ಅವರಿಗೆ ಸೇನಾ ಗೌರವ ಸಲ್ಲಿಸುವುದರೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮುಂಜಾನೆಯಿಂದ ಮಧ್ಯಾಹ್ನದ ತನಕ ರಾವತ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಗಣ್ಯಾತಿಗಣ್ಯರು ಗೌರವ ಸಲ್ಲಿಸಿದರು.
ನಂತರ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಕೊಂಡೊಯಲಾಯಿತು. ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂತಿಮ ಗೌರವ ಸಲ್ಲಿಸಿದರು. ನಂತರ ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಬ್ರಾರ್ ಸ್ಕ್ವೇರ್ ನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಪುತ್ರಿಯರಾದ ಕೃತಿಕಾ ಹಾಗೂ ತಾರಿಣಿ ಅಗ್ನಿ ಸ್ಪರ್ಶ ಮಾಡಿದರು.