ಪ್ರಜಾಸ್ತ್ರ ಸುದ್ದಿ
ಶ್ರೀನಗರ: ಚೀನಾದ ಜೊತೆಗೆ ನಡೆಯುತ್ತಿರುವ ಸಂಘರ್ಸದ ಟೈಂನಲ್ಲಿ ನಂದು ಒಂದಿಷ್ಟು ಇರ್ಲಿ ಎಂದು ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪೊಂಚ್ ಜಿಲ್ಲೆಯ ಕೃಷ್ಣ ಘಾಟಿ, ಮನಕೋಟ್, ನೌಶೇರಾ ಸೆಕ್ಟರ್ ನಲ್ಲಿ ಪಾಕ್ ಸೈನೀಕರು ಕದನ ವಿರಾಮ ಉಲ್ಲಂಘಿಸಿದ್ದಾರೆ.
ಭಾರತೀಯ ಸೈನಿಕರು ಸಹ ಸರಿಯಾಗಿಯೇ ಉತ್ತರ ನೀಡಿದ್ದಾರೆ. ಇಂದು ಮುಂಜಾನೆ 3.30ರಲ್ಲಿ ಕೃಷ್ಣಘಾಟಿ ಹಾಗೂ ನೌಶೇರಾ ಬಳಿ ಕದನ ವಿರಾಮ ಉಲ್ಲಂಘಿಸಿ ಫೈರಿಂಗ್ ಹಾಗೂ ಶೆಲ್ ದಾಳಿ ನಡೆಸಿದೆ. ಮತ್ತೆ 5.30ಕ್ಕೆ ನೌಶೇರಾ ಸೆಕ್ಟರ್ ನಲ್ಲಿ ಫೈರಿಂಗ್ ಮಾಡಿದ್ದು, ಇದಕ್ಕೆ ಭಾರತೀಯ ಯೋಧರ ತಿರುಗೇಟು ನೀಡಿದ್ದಾರೆ. ಈ ವೇಳೆ ಯಾವುದೇ ಅನಾಹುತ ಸಂಭವಿಸಿಲ್ಲವೆಂದು ತಿಳಿದು ಬಂದಿದೆ.